ಬಂಟ್ವಾಳ: ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿ- ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ!!! - News Ubaar

ಇತ್ತೀಚಿನ ಸುದ್ದಿ

Subscribe

ಮಂಗಳವಾರ, ಮೇ 27, 2025

ಬಂಟ್ವಾಳ: ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿ- ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ!!!

 

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.



ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹೀಂ ಮತ್ತು ಸಹಾಯಕ ಶಾಫಿ ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಹಲ್ಲೆಗೀಡಾದ ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕನ ಸಹೋದರ ರಹೀಮ್ ಎಂಬಾತ ಮೃತಾಪಟ್ಟಿದ್ದಾರೆ, ಶಾಫಿ ಅವರ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳನ್ನು ಬಂಟ್ವಾಳ ಆಸ್ಪತ್ರೆಗೆ ರವಾನಿಸಲಾಗಿದೆ.


ಪಿಕಪ್ ಮಾಲೀಕ ರಹೀಂ ಮನೆಯೊಂದರ ಬಳಿ ಮರಳು ಅನ್’ಲೋಡ್ ಮಾಡಿ ವಾಪಾಸಾಗುವ ಸಮಯದಲ್ಲಿ ಅಪರಿಚಿತ ದುಷ್ಕರ್ಮಿಗಳ ತಂಡ ತಲ್ವಾರ್ ನಿಂದ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.



Pages